ಬೆಂಗಳೂರು: ಕೆ. ಆರ್. ಪುರಂ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಂದೀಶ್ ಮಾನಸಿಕವಾಗಿ ನೊಂದು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಗೂ ಅವರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ಉತ್ತರ ಭಾರತದ ಅಧಿಕಾರಿಗಳ ದರ್ಪದಿಂದ ಹಾಗೂ ಸರ್ಕಾರದಿಂದಲೇ ಆಗಿರುವ ಕಗ್ಗೊಲೆಯೇ ಹೊರತು ಬರೀ ಹೃದಯಾಘಾತ ಅಲ್ಲ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.
‘ಈ ಸಾವಿಗೆ ಬಿಜೆಪಿ ಹೈಕಮಂಡ್ ಕೃಪಾಕಟಾಕ್ಷ ಇರುವ, ಅದರಲ್ಲೂ ಉತ್ತರ ಭಾರತ ಮೂಲದ ಹಿರಿಯ ಅಧಿಕಾರಿಗಳ ಉದ್ದತಟನ, ಕಿರುಕುಳ, ಸರ್ಕಾರದ ನಡವಳಿಕೆ, ಕಾಸಿಗಾಗಿ ಹುದ್ದೆ ಕೊಡುತ್ತಿರುವುದೇ ಕಾರಣ’ ಎಂದು ಎಚ್. ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.