ಹುಬ್ಬಳ್ಳಿ : ಬಣ್ಣದರ್ಪನೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡಿದರು. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಂದಗೋಳ ಶಾಲೆಗೆ ಬಣ್ಣ ಹಚ್ಚೋ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕುಂದಗೋಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಗೆ ಬಣ್ಣ ಹಚ್ಚೋ ಮೂಲಕ ಬಣ್ಣದರ್ಪಣೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಣ್ಣದರ್ಪನೆ ಅಭಿಯಾನಕ್ಕೆ ನಟ ,ರಾಜ್ಯಸಭಾ ಸದಸ್ಯ ಜಗ್ಗೇಶ್ ಸಾಥ್ ನೀಡಿದರು. ಅಭಿಯಾನದಲ್ಲಿ ಬಸವರಾಜ್ ಹೊರಟ್ಟಿ, ಶಾಸಕ ಅರವಿಂದ ಬೆಲ್ಲದ್ ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

