Breaking News

ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ಜೆಡಿಎಸ್ ಸಿದ್ಧತೆ : ಕುಮಾರಸ್ವಾಮಿ


ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ಜೆಡಿಎಸ್ ಸಿದ್ಧತೆ ನಡೆಸಿದ್ದು, ಪ್ರಬಲ ಸಮುದಾಯಗಳನ್ನು ಸೆಳೆಯಲು ರಣತಂತ್ರ ಹೂಡಲಾಗಿದೆ. ದೊಡ್ಡ-ದೊಡ್ಡ ಸಮುದಾಯ ಸೆಳೆಯಲು ಪ್ಲಾನ್​​​ ಶುರುವಾಗಿದ್ದು, ಉತ್ತರ ಕರ್ನಾಟಕದ ಲಿಂಗಾಯತ ಮತ ಸೆಳೆಯಲು ಇಂದಿನಿಂದ ವರ್ಕೌಟ್ ಮಾಡಲಾಗುತ್ತಿದೆ. ಲಿಂಗಾಯತ ಮುಖಂಡರ ಜೊತೆ ಇಂದು ಕುಮಾರಸ್ವಾಮಿ ಬೆಂಗಳೂರಿನ JDS ಕಚೇರಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸೀಟ್ ಗೆಲ್ಲಲು HDK ಪ್ಲಾನ್ ಮಾಡಿದ್ದು, ​​​ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಪ್ರಾಬಲ್ಯ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತರದ್ದೇ ಪ್ರಾಬಲ್ಯವಿದ್ದು, ಪಂಚರತ್ನ ಸಮಾವೇಶದ ಮೂಲಕ ಮುಖಂಡರ ಸೆಳೆಯೋ ಪ್ಲಾನ್​​ ನಡೆಸಲಾಗಿದೆ. ಉತ್ತರ ಕರ್ನಾಟಕದ ಲಿಂಗಾಯತ ಮುಖಂಡರನ್ನು ಸೆಳೆಯಲು ತಂತ್ರ ರೂಪಿಸಲಾಗಿದೆ. ಮುಖಂಡರ ಸೆಳೆಯಲು ಜೆಡಿಎಸ್​ ಶಾಸಕರಿಗೆ ಟಾರ್ಗೆಟ್ ನೀಡುವ ಹೆಚ್​ಡಿಕೆ, JDS ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಶಾಸಕ ವೆಂಕಟರಾವ್​​ ನಾಡಗೌಡ ಸಾಥ್​​​ ನೀಡಲಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *