ಹನೂರು: ತಾಲ್ಲೂಕಿನ ಜೀರಿಗೆಗದ್ದೆ ಗ್ರಾಮದ ನಿವಾಸಿ ಮಾದಮ್ಮ ರವರು ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಗದ್ದೆ ಗ್ರಾಮದ ಮಾದಮ್ಮ ಆದಿವಾಸಿ ಮಹಿಳೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಹಾಗೂ ಹನೂರು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಮಾದಮ್ಮರವರು ಬುಡಕಟ್ಟು ಸೋಲಿಗ ಜನಾಂಗಕ್ಕೆ ಸೇರಿದವರಾಗಿದ್ದು ಇವರು 85 ವರ್ಷಗಳನ್ನು ಪೂರೈಸಿ ಆರೋಗ್ಯವಂತರಾಗಿದ್ದಾರೆ. ಈವರಿಗೆ 5 ಮಕ್ಕಳಿದ್ದು ಎಲ್ಲರಿಗೂ ವಿವಾಹ ಮಾಡಿಕೊಟ್ಟಿದ್ದಾರೆ. ಎಂಬತ್ತೈದು ವರ್ಷಗಳ ಇಳಿ ವಯಸ್ಸಿನಲ್ಲೂ ಸಹ ಸಂಘಟನೆ ಹೋರಾಟಗಳಲ್ಲಿ ಭಾಗವಹಿಸುತ್ತಾರೆ .ಸೋಲಿಗ ಅಭಿವೃದ್ಧಿ ಸಂಘದ ಸ್ಥಾಪನೆ ಪ್ರಾರಂಭದಲ್ಲಿ ಅತಿಹೆಚ್ಚಿನ ಮುತುವರ್ಜಿ ವಹಿಸಿ ಅನೇಕ ಭೂಮಿಯ ಹಕ್ಕು ಜೀತ ಪದ್ದತಿ ಸಂದರ್ಭದಲ್ಲಿ ಸೋಲಿಗರನ್ನು ಒಗ್ಗೂಡಿಸಿ ಅನೇಕ ಹೋರಾಟದಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

