Breaking News

ಇಂದು ಪವರ್‌ಸ್ಟಾರ್‌ ಗೆ “ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ



ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನದಂದೇ ಪ್ರತಿಷ್ಠಿತ “ಕರ್ನಾಟಕ ರತ್ನ’ ಪ್ರಶಸ್ತಿಯು ಮರಣೋತ್ತರವಾಗಿ, ಕರುನಾಡಿನ ಜನರ ಹೃದಯ ಸಿಂಹಾಸನದಲ್ಲಿ ವೀರಾಜಮಾನರಾಗಿರುವ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಮುಡಿಗೇರಲಿದೆ.

ಕರುನಾಡಿನ ಕಣ್ಮಣಿ ಅಪ್ಪು ಅವರಿಗೆ ಅಧಿಕೃತವಾಗಿ “ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಮುಂಭಾಗ ಭರ್ಜರಿ ಸಿದ್ಧತೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಖ್ಯಾತ ನಟ ರಜನಿಕಾಂತ್‌, ಜೂನಿಯರ್‌ ಎನ್‌ಟಿಆರ್‌, ಇನ್ಫೋಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ, ಕನ್ನಡ ಚಲನಚಿತ್ರ ರಂಗದ ಗಣ್ಯರು ಭಾಗವಹಿಸಲಿರುವ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಆವರಣವನ್ನು ಸಿಂಗರಿಸಲಾಗಿದ್ದು ಆಕರ್ಷಣೀಯ ವೇದಿಕೆ ಸಜ್ಜುಗೊಂಡಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *