ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನದಂದೇ ಪ್ರತಿಷ್ಠಿತ “ಕರ್ನಾಟಕ ರತ್ನ’ ಪ್ರಶಸ್ತಿಯು ಮರಣೋತ್ತರವಾಗಿ, ಕರುನಾಡಿನ ಜನರ ಹೃದಯ ಸಿಂಹಾಸನದಲ್ಲಿ ವೀರಾಜಮಾನರಾಗಿರುವ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಮುಡಿಗೇರಲಿದೆ.
ಕರುನಾಡಿನ ಕಣ್ಮಣಿ ಅಪ್ಪು ಅವರಿಗೆ ಅಧಿಕೃತವಾಗಿ “ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಮುಂಭಾಗ ಭರ್ಜರಿ ಸಿದ್ಧತೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಖ್ಯಾತ ನಟ ರಜನಿಕಾಂತ್, ಜೂನಿಯರ್ ಎನ್ಟಿಆರ್, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ಕನ್ನಡ ಚಲನಚಿತ್ರ ರಂಗದ ಗಣ್ಯರು ಭಾಗವಹಿಸಲಿರುವ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಆವರಣವನ್ನು ಸಿಂಗರಿಸಲಾಗಿದ್ದು ಆಕರ್ಷಣೀಯ ವೇದಿಕೆ ಸಜ್ಜುಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

