ರಾಮನಗರ : ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳು ವಿಚಾರ ವೇಳೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.
ಶ್ರೀಗಳ ಆತ್ಮಹತ್ಯೆ ಹಿಂದೆ ಮತ್ತೊಬ್ಬ ಪ್ರತಿಷ್ಠಿತ ಮಠವೊಂದರ ಪ್ರಭಾವಿ ಸ್ವಾಮೀಜಿಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬಂಡೆ ಮಠದ ಬಸವಲಿಂಗ ಶ್ರೀ ಆತ್ಮಹತ್ಯೆ ಸಂಬಂಧ ಮೂವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಡೆತ್ನೋಟ್ನಲ್ಲಿ ಇಬ್ಬರು ಶ್ರೀಗಳಿಂದ ತೊಂದರೆ ಆಗುತ್ತಿದೆ ಎಂದು ಬಸವಲಿಂಗ ಶ್ರೀ ಉಲ್ಲೇಖಿಸಿದ್ದಾರೆ. ಇದನ್ನು ಬೆನ್ನತ್ತಿರುವ ಪೊಲೀಸರು ಆ ಮತ್ತೊಬ್ಬ ಶ್ರೀಗೂ ಗಾಳ ಹಾಕಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿಚಾರಣೆ ನಡೆಸಿದ ಪೊಲೀಸರಿಗೆ ಮತ್ತಷ್ಟು ಆಶ್ಚರ್ಯಕರ ವಿಚಾರಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

