Breaking News

ಗಂಧದಗುಡಿ ಚಿತ್ರ ವಿಕ್ಷೀಸಿದ ಮಾಜಿ ಸಿಎಂಶಿವ

ಶಿವಮೊಗ್ಗ: ಸದಾ ರಾಜಕೀಯ ಜಜಾಂಟದಲ್ಲಿರುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಬಿಡುವು ಮಾಡಿಕೊಂಡು ಇಲ್ಲಿನ ಸಿಟಿ ಸೆಂಟ್ರಲ್ ಮಾಲ್‌ನಲ್ಲಿರುವ ಭಾರತ್ ಸಿನಿಮಾಸ್‌ನಲ್ಲಿ ಪವರ್‌ಸ್ಟಾರ್ ಪುನೀತ್‌ ರಾಜ್​ಕುಮಾರ್ ಅವರ ಸಾಕ್ಷ್ಯಚಿತ್ರ ‘ಗಂಧದಗುಡಿ’ ವೀಕ್ಷಿಸಿದರು.

ಪುತ್ರ ಬಿ.ವೈ.ರಾಘವೇಂದ್ರ ಮತ್ತು ಸೊಸೆ ತೇಜಸ್ವಿನಿ ರಾಘವೇಂದ್ರ ಅವರೊಂದಿಗೆ ಯಡಿಯೂರಪ್ಪ ಸಿನಿಮಾ ವೀಕ್ಷಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಎಸ್.ಎಸ್.ಜ್ಯೋತಿಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಮತ್ತಿತರರು ಸಾಥ್ ನೀಡಿದರು. ಯಡಿಯೂಪ್ಪ ಅವರು ಮಾಲ್‌ಗೆ ಆಗಮಿಸುತ್ತಿದ್ದಂತೆ ಮುಖ್ಯದ್ವಾರದಲ್ಲಿ ಎದುರಾದ ಪುಟಾಣಿಯ ಕೈಕುಲುಕಿದರು. ಬಳಿಕ ಮಾಲ್ ಸಿಬ್ಬಂದಿ ಸೇರಿದಂತೆ ಗಂಧದಗುಡಿ ಸಿನಿಮಾ ವೀಕ್ಷಣೆಗೆ ಬಂದಿದ್ದ ಅಪ್ಪು ಅಭಿಮಾನಿಗಳು ಯಡಿಯೂರಪ್ಪ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *