ಬೆಂಗಳೂರು : ಉತ್ತಮ ಮೂಲಸೌಕರ್ಯವುಳ್ಳ 50 ಸಾವಿರ ಎಕರೆ ಲ್ಯಾಂಡ್ ಬ್ಯಾಂಕ್ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲಭ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಇನ್ವೆಸ್ಟ್ ಕರ್ನಾಟಕ 2022 ಜಾಗತಿಕ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಹುಬ್ಬಳ್ಳಿ ಧಾರವಾಡ, ಮಂಗಳೂರು, ಕಲಬುರ್ಗಿ, ಬಳ್ಳಾರಿ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಲ್ಯಾಂಡ್ ಬ್ಯಾಂಕ್ ಲಭ್ಯವಿದೆ. ಶಿವಮೊಗ್ಗ ಬಿಜಾಪುರ ವಿಮಾನ ನಿಲ್ದಾಣ ಶೀಘ್ರ ಆರಂಭವಾಗುತ್ತಿದ್ದು, ಕಾರವಾರದಲ್ಲಿ ವಿಮಾನ ನಿಲ್ದಾಣವಾಗಲಿದೆ. 6000 ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿದೆ ರಾಜ್ಯದಲ್ಲಿನ ಮೂಲಸೌಕರ್ಯ ವ್ಯವಸ್ಥೆ, ನೀತಿಗಳು ಬಂಡವಾಳ ಹೂಡಿಕೆದಾರರನ್ನು ನಿರಾಶೆಗೊಳಿಸುವುದಿಲ್ಲ. ಈ ಸಮಾವೇಶ ಕರ್ನಾಟಕದ ಆರ್ಥಿಕತೆಯ ಮುಂದಿನ ಹಂತದ ಅಭಿವೃದ್ಧಿಗೆ ತಳಪಾಯವಾಗಲಿದೆ ಎಂದರು.
ಕೇಂದ್ರ ಸಚಿವ ಭಗವಂತ ಖೂಬಾ ಅವರು ಕೇಂದ್ರದಿಂದ ಸಾಕಷ್ಟು ಸಹಕಾರ ನೀಡುತ್ತಿದ್ದಾರೆ. ಬೀದರ್ ನಲ್ಲಿ ಸಿಪೆಟ್ ಸ್ಥಾಪನೆಗೆ ಭೂಮಿಪೂಜೆ ಮಾಡಲಾಗಿದೆ. ಕೈಗಾರಿಕಾ ಸಚಿವ ನಿರಾಣಿ ಹಾಗೂ ಅಧಿಕಾರಿಗಳು ಜಾಗತಿಕ ಉದ್ದಿಮೆದಾರರ ಉತ್ತಮ ಕೆಲಸ ಮಾಡಿದ್ದಾರೆ. ನಮ್ಮ ನಿರೀಕ್ಷೆ ಮೀರಿ ಹೂಡಿಕೆಯಾಗದೆ. ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಶ್ರಮ ವಹಿಸಿದ್ದಾರೆ ಎಂದು ಶ್ಲಾಘಿಸಿದರು.
ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯಸಚಿವ ಭಗವಂತ್ ಖೂಬಾ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಇಂಧನ ಸಚಿವ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ:ಇ. ವಿ.ರಮಣರೆಡ್ಡಿ, ಆಯುಕ್ತೆ ಗುಂಜನ್ ಕೃಷ್ಣಾ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

