Breaking News

ನ.7, 8 ರಂದು ಸಿಎಂ ಉಡುಪಿ ಪ್ರವಾಸ



ಉಡುಪಿ : ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 7 ಹಾಗೂ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನವೆಂಬರ್ 7 ರಂದು ಬೆಳಗ್ಗೆ 10.30 ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, 11 ಗಂಟೆಗೆ ಕಾಪುವಿನಲ್ಲಿ ಜನ ಸಂಕಲ್ಪ ಕಾರ್ಯಕ್ರಮ, ಮಧ್ಯಾಹ್ನ 1.50 ಕ್ಕೆ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಮಣಿಪಾಲ್ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್ ವತಿಯಿಂದ ಆಯೋಜಿಸಿರುವ ಕರಾವಳಿಯ ಹಿರಿಯ ಪತ್ರಿಕೋದ್ಯೋಗಿಗಳ ಜನ್ಮ ಶತಮಾನೋತ್ಸವೋತ್ತರ ಸಂಸ್ಮರಣೆ ಕಾರ್ಯಕ್ರಮ, ಮಧ್ಯಾಹ್ನ 3.45 ಕ್ಕೆ ಕುಂದಾಪುರ ತಾಲೂಕು ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಆಯೋಜಿಸಲಾದ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ, ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನ. 8 ರಂದು ಬೆಳಗ್ಗೆ 9 ಗಂಟೆಗೆ ಆದಿ ಉಡುಪಿ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಮೂಲಕ ಶಿರಹಟ್ಟಿಗೆ ತೆರಳಲಿದ್ದಾರೆ.

Share News

About BigTv News

Check Also

Featured Video Play Icon

ಕಾರ್ಪೋರೆಟರ್ ಮಗಳ ಭೀಕರ ಕೊಲೆ:ಬಿವ್ಹಿಬಿ ಕ್ಯಾಂಪಸ್ ನಲ್ಲಿ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿ..!

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳನ್ನು ಮನಬಂದಂತೆ ಚಾಕು ಇರಿದು ಕೊಲೆಗೈದ ಘಟನೆ ನಗರದ ಪ್ರತಿಷ್ಟಿತ ಬಿವಿಬಿ ಕಾಲೇಜು ಕ್ಯಾಂಪಸ್‌ ನಲ್ಲಿ ನಡೆದಿದೆ.ನೇಹಾ …

Leave a Reply

Your email address will not be published. Required fields are marked *

You cannot copy content of this page