Breaking News

ಮೊದಲ ಆಹ್ವಾನ ಪತ್ರಿಕೆಯನ್ನು ಎಚ್‌.ಡಿ.ದೇವೇಗೌಡರಿಗೆ ನೀಡಿದ್ದೇವೆ  : ಬಿಜೆಪಿ ಸ್ಪಷ್ಟನೆ



ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ, ಮೊದಲ ಆಹ್ವಾನ ಪತ್ರಿಕೆಯನ್ನು ಎಚ್‌.ಡಿ.ದೇವೇಗೌಡರಿಗೆ ನೀಡಿದ್ದೇವೆ ಎಂದು ಸ್ಪಷ್ಟನೆ ನೀಡಿದೆ.

ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಎಚ್‌.ಡಿ.ದೇವೇಗೌಡರಿಗೆ ಮೊದಲ ಆಹ್ವಾನ ಪತ್ರ ಹೋಗಿದ್ದು, ಮಾತ್ರವಲ್ಲ ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್‌ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ಟ್ವೀಟ್‌ ಮೂಲಕ ಬಿಜೆಪಿ ತಿರುಗೇಟು ನೀಡಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *