Breaking News

ಸ್ಮಾರಕ ನಿರ್ಮಾಣವಾಗಲಿ, ಪಾಪು ಜೀವನ ಚರಿತ್ರೆ ಪಠ್ಯದಲ್ಲಿ ಸೇರ್ಪಡೆ ಮಾಡಿ- ಪಾಪು ಮೊಮ್ಮಗಳು ವಿಜಯಾ ಪಾಟೀಲ್

ಹುಬ್ಬಳ್ಳಿ; ಕನ್ನಡದ ಕಟ್ಟಾಳು ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಸ್ಮಾರಕವನ್ನು ಹುಬ್ಬಳ್ಳಿಯಲ್ಲಿ ನಿರ್ಮಾಣ ಮಾಡಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ನಾಡೋಜ ದಿ.ಪಾಟೀಲ ಪುಟ್ಟಪ್ಪ ಅವರ ಮೊಮ್ಮಗಳು ವಿಜಯಾ ಪಾಟೀಲ ಆಗ್ರಹಿಸಿದರು ಹುಬ್ಬಳ್ಳಿಯ ಪತ್ರಿಕಾ ಭವನದಲ್ಲಿ
ದು ಮಾತನಾಡಿದ ಅವರು, ಡಾ ಪಾಟೀಲ್ ಪುಟ್ಟಪ್ಪನವರ

ಈ ಹಿಂದೆ ಸರ್ಕಾರದ ಪರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕೃಷಿ ಸಚಿವ ಬಿ.ಸಿ.ಪಾಟೀಲ ಅಂತಿಮ ನಮನಗಳನ್ನು ಪಡೆದು ಪಾಪು ಅವರನ್ನು ಹಾಡಿ ಹೊಗಳಿ ಸ್ಮಾರಕ ಭವನ ಎರಡು ತಿಂಗಳಲ್ಲಿ ಮಾಡಲಾಗುತ್ತದೆ ಎಂದು ಆಶ್ವಾಸನೆ ನೀಡಿದ್ದರು. ಆದರೆ ಇದುವರೆಗೆ ಇದು ಸಾಧ್ಯವಾಗಿಲ್ಲ. ಸಮಾಧಿ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಾದರೆ, ಪತ್ನಿ ಇಂದುಮತಿ ಅವರದು ಹುಬ್ಬಳ್ಳಿಯ ಸ್ವಗೃಹ ‘ಪ್ರಪಂಚ’ದ ಆವರಣದಲ್ಲಿ ಮಾಡಲಾಗಿದೆ. ಇದು ಸರಿಯಲ್ಲ ಆದ್ದರಿಂದ ಎಂಬ ಅಭಿಪ್ರಾಯ ಕೇಳಿ ಬಂದಿದ್ದವು.

ನಮ್ಮ ನಾಡು’ ಕೈ ಬರಹದ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅವರು 1936ರಲ್ಲಿ ವಾರ ಪತ್ರಿಕೆಯವಿಶಾಲ ಕರ್ನಾಟಕ’ದ ಸಂಪಾದಕತ್ವ ವಹಿಸುತ್ತಾರೆ. ನಂತರ, ಅದು ಆಗಸ್ಟ್ 9, 1947ರಂದು ದಿನಪತ್ರಿಕೆಯಾಯಿತು.
ಕ್ಯಾಲಿಫೋರ್ನಿಯಾದಿಂದ ಬಂದ ನಂತರ, 1952ರಲ್ಲಿ ನವಯುಗ, 1954ರಲ್ಲಿ ಪ್ರಪಂಚ ಸಾಪ್ತಾಹಿಕ, 1956ರಲ್ಲಿ ಸಂಗಮ ಮಾಸಿಕ, 1959ರಲ್ಲಿ ವಿಶ್ವವಾಣಿ, 1961ರಲ್ಲಿ ಮನೋರಮ ಸಿನಿಮಾ ಪಾಕ್ಷಿಕ, 1964ರಲ್ಲಿ ಸ್ತ್ರೀ ಮಾಸಿಕ ಸೇರಿ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಪಾಪು ಕನ್ನಡ ಪತ್ರಿಕೋದ್ಯಮದಲ್ಲಿ ಪ್ರಯೋಗಾತ್ಮಕ ಹಾದಿಯನ್ನು ತುಳಿದರು. ಜತೆಗೆ ಹಲವು ಪತ್ರಿಕೆಗಳಲ್ಲಿ ಅಂಕಣಕಾರರಾಗಿಯೂ ಗುರುತಿಸಿಕೊಂಡರು. ಅವರ ಈ ಎಲ್ಲ ವೂ ಮುಂದಿನ ಪೀಳಿಗೆಗೆ ಗೊತ್ತಾಗಬೇಕು.

ಏಕೀಕರಣ ಹೋರಾಟ ಕರ್ನಾಟಕ ಏಕೀಕರಣ ಹೋರಾಟದಲ್ಲಿ ಪಾಟೀಲ್‌ ಪುಟ್ಟಪ್ಪನವರು ಸಕ್ರಿಯವಾಗಿ ಭಾಗವಹಿಸಿದ್ದರು. 1949ರ ಆರಂಭದಲ್ಲಿ ಕಲಬುರಗಿಯಲ್ಲಿ ಕರ್ನಾಟಕ ಏಕೀಕರಣ ಪರಿಷತ್ತಿನಲ್ಲಿ ಮೈಸೂರು ಸಹಿತ ಕರ್ನಾಟಕವಾಗಬೇಕೆನ್ನುವ ಪಾಟೀಲ ಪುಟ್ಟಪ್ಪ ಮಂಡಿಸಿದ ಗೊತ್ತುವಳಿ ಕೋ. ಚೆನ್ನಬಸಪ್ಪನವರ ಅನುಮೋದನೆ ಪಡೆದು ಸ್ವೀಕೃತವಾಯಿತು. ಪಾಟೀಲ್‌ ಪುಟ್ಟಪ್ಪನವರು ಒಳಗೊಂಡ ಬಿ.ಎನ್.ದಾತಾರ ನೇತೃತ್ವದ ತಂಡದಿಂದ ಕರ್ನಾಟಕ ಏಕೀಕರಣಕ್ಕಾಗಿ ಮೈಸೂರಲ್ಲಿ ಸರದಾರ ಪಟೇಲರನ್ನು ಭೇಟಿ ಮಾಡಿದ್ದರು. ಇಂತಹ ಧಿಮಂತನನ್ಮ ಸರ್ಕಾರ ಮರೆತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲೇ ಜಮೀನು ನೀಡಿ ಅಲ್ಲೇ ಅವರ ಸಮಾಧಿ ಮಾಡಿ ಸ್ಮಾರಕ ಮಾಡಬೇಕಿತ್ತು. ಇನ್ನಾದರೂ ಅವರ ಹೆಸರಲ್ಲಿ ಪ್ರತ್ಯೇಕವಾಗಿ ಒಂದು ಎಕರೆ ಜಮೀನು ಕೊಟ್ಟು, ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಅವರು ಒತ್ತಾಯ ಮಾಡಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *