Breaking News

ಮೋದಿ ಸರ್ಕಾರ ಇಂದು ಇಡೀ ದೇಶವನ್ನೇ ನಾಶ ಮಾಡುತ್ತಿದೆ : ಎಂ. ವೀರಪ್ಪ ಮೊಯಿಲಿ


ಬೆಂಗಳೂರು: ‘ಕೆಟ್ಟ ಆಲೋಚನೆಗಳನ್ನು ಬೆಳೆಯಲು ಬಿಟ್ಟರೆ ಅದು ಇಡೀ ವ್ಯವಸ್ಥೆಯನ್ನು ನಾಶ ಮಾಡಲಿದೆ ಎಂದು ಜವಾಹರಲಾಲ್ ನೆಹರೂ ಹೇಳಿದ್ದರು. ಅದರಂತೆ ಮೋದಿ ಸರ್ಕಾರ ಇಂದು ಇಡೀ ದೇಶವನ್ನೇ ನಾಶ ಮಾಡುತ್ತಿದೆ’ ಎಂದು ಕಾಂಗ್ರೆಸ್‌ ಮುಖಂಡ ಎಂ. ವೀರಪ್ಪ ಮೊಯಿಲಿ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ನೆಹರೂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನೆಹರೂ ಅವರು ವೈಜ್ಞಾನಿಕವಾಗಿ ಆಲೋಚನೆ ಮಾಡಬೇಕು ಎಂದು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಿದರು. ದೇಶದ ಬಡತನ, ಹಸಿವಿನ ಬಾಧೆ ನೀಗಿಸಲು ಇರುವ ಅಸ್ತ್ರ ವಿಜ್ಞಾನ ಎಂದು ಹೇಳಿದ್ದರು’ ಎಂದರು.

‘ಮೂಢನಂಬಿಕೆ, ಅನಕ್ಷರತೆ, ಬಡತನ ನಿರ್ಮೂಲನೆ ವಿಜ್ಞಾನದಿಂದ ಮಾತ್ರ ಸಾಧ್ಯ ಎಂಬ ಸಂದೇಶವನ್ನು ನೆಹರೂ ಕೊಟ್ಟರು. ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದಲ್ಲಿ ಅಂಧಕಾರ, ಜಾತಿ, ಮತೀಯ ವಾದವನ್ನು ಪಸರಿಸಿ ದೇಶ ನಾಶ ಮಾಡುತ್ತಿದ್ದಾರೆ. ಈಗ ಸಂಸ್ಕೃತಿಯ ಅರ್ಥವನ್ನೇ ಬದಲಿಸಲಾಗುತ್ತಿದೆ’ ಎಂದು ಟೀಕಿಸಿದರು.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *