ಉಡುಪಿ: ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಮಾಹೆ ವಿಶ್ವವಿದ್ಯಾನಿಲಯದ 30ನೇ ಘಟಿಕೋತ್ಸವಕ್ಕೆ ಆಗಮಿಸಲಿದ್ದು, ಆ ಪ್ರಯುಕ್ತ ನಗರದಲ್ಲಿ ಗುರುವಾರವೇ ಪೊಲೀಸರು ಪ್ರಾಯೋಗಿಕವಾಗಿ ಝೀರೋ ಟ್ರಾಫಿಕ್ ಮಾಡಿದರು.
ಆದಿ ಉಡುಪಿಯ ಹೆಲಿಪ್ಯಾಡ್ನಿಂದ ಮಣಿಪಾಲದ ವರೆಗೆ ಪ್ರಾಯೋಗಿಕವಾಗಿ ಝೀರೋ ಟ್ರಾಫಿಕ್ ಮಾಡಲಾಯಿತು.
ಈ ಕಾರಣಕ್ಕೆ ನಗರದಾದ್ಯಂತ
ಟ್ರಾಫಿಕ್ ದಟ್ಟನೆ ಉಂಟಾಯಿತು. ಈಗಾಗಲೇ ಸ್ಟೇಟ್ ಇಂಟೆಲಿಜೆನ್ಸ್, ಎನ್ಎಸ್ಜಿ, ಯುಪಿ ಪೊಲೀಸರು ಉಡುಪಿಯಲ್ಲಿ ಬೀಡುಬಿಟ್ಟಿದ್ದಾರೆ. 100ರಿಂದ 150 ಮಂದಿ ಜಿಲ್ಲೆಯ ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4ರವರೆಗೆ ನಗರದಾದ್ಯಂತ ಬಿಗು ಪೊಲೀಸ್ ಭದ್ರತೆ ಇರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

