Breaking News


ಸಿಎಂ ಬಂಧಿಸುವಂತೆ ಸಿದ್ದರಾಮಯ್ಯ ಆಗ್ರಹ


ಬೆಂಗಳೂರು : ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ.

ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲದ ಮುಂದುವರಿದ ಭಾಗವಾದ ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *