Breaking News


ಬೈಕ್‌ಗೆ ಕ್ಯಾಂಟರ್ ವಾಹನ ಡಿಕ್ಕಿ : ಸವಾರ ಸಾವು


ವಿಜಯಪುರ : ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಕ್ರಾಸ್ ಬಳಿ ನಡೆದಿದೆ.

ಗುರುರಾಜ್ ಶಿರಶ್ಯಾಡ (32) ಮೃತ ಬೈಕ್ ಸವಾರ ಎಂದು ತಿಳಿದುಬಂದಿದೆ. ಮೃತ ಗುರುರಾಜ್​ ಬೈಕ್‌ನಲ್ಲಿ ಹೋಗುವಾಗ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಬೈಕ್​ ಡಿಕ್ಕಿಹೊಡೆದಿದ್ದು,ಬೈಕ್​ ಸವಾರನ ತಲೆ ಮೇಲೆ ಕ್ಯಾಂಟರ್​ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಕ್ಯಾಂಟರ್​ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.‌ ಈ ಅಪಘಾತದ ದೃಶ್ಯ ಪಕ್ಕದ ಹೋಟೆಲ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ. ಝಳಕಿ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *