ಮೈಸೂರು : ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೊಸಹೊಳಲು ಗ್ರಾಮದ ರೈತ ಲಿಂಗೇಗೌಡ(72) ಎಂಬುವವರು ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾರೆ.
4 ಎಕರೆ 13 ಗುಂಟೆ ಜಮೀನು ಹೊಂದಿದ್ದ ರೈತ ಲಿಂಗೇಗೌಡ, ₹2 ಲಕ್ಷ ಸಾಲಕ್ಕೆ ಕಾವೇರಿ ಗ್ರಾಮೀಣ ಬ್ಯಾಂಕ್ಗೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪಡೆದ ಸಾಲ ತೀರಿಸಿಲ್ಲ ಎಂದು ಬ್ಯಾಂಕ್ ಸಾಲ ನಿರಾಕರಿಸಿತ್ತು. ಇದರಿಂದ ಮನನೊಂದು ಬ್ಯಾಂಕ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡ ರೈತ ಲಿಂಗೇಗೌಡನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾರೆ. ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

