Breaking News

ಸಾಲ ಕೊಡಲು ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಮೈಸೂರು : ಜಿಲ್ಲೆ ಹೆಚ್​​.ಡಿ.ಕೋಟೆ ತಾಲೂಕಿನ ಹೊಸಹೊಳಲು ಗ್ರಾಮದ ರೈತ ಲಿಂಗೇಗೌಡ(72) ಎಂಬುವವರು ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾರೆ.

4 ಎಕರೆ 13 ಗುಂಟೆ ಜಮೀನು‌ ಹೊಂದಿದ್ದ ರೈತ ಲಿಂಗೇಗೌಡ, ₹2 ಲಕ್ಷ ಸಾಲಕ್ಕೆ ಕಾವೇರಿ ಗ್ರಾಮೀಣ ಬ್ಯಾಂಕ್​ಗೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪಡೆದ ಸಾಲ ತೀರಿಸಿಲ್ಲ ಎಂದು ಬ್ಯಾಂಕ್ ಸಾಲ ನಿರಾಕರಿಸಿತ್ತು. ಇದರಿಂದ ಮನನೊಂದು ಬ್ಯಾಂಕ್​​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡ ರೈತ ಲಿಂಗೇಗೌಡನನ್ನು ಕೆ.ಆರ್​.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾರೆ. ಅಂತರಸಂತೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *