Breaking News

ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ : ನಾಲ್ವರ ಮೇಲೆ ಬ್ಲೇಡ್​ನಿಂದ ಮಾರಣಾಂತಿಕ ಹಲ್ಲೆ

ಅಥಣಿ: ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಲಾಟೆ ನಡೆದು, ಕೆಲವು ಕಿಡಿಗೇಡಿಗಳು ನಾಲ್ವರ ಮೇಲೆ ಬ್ಲೇಡ್​ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.‌ಈ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

ಚೇತನ ಹಡಪದ, ಪ್ರಸಾದ ಅಶೋಕ ಸಿಂದೂರೆ ಹಾಗು ವಿಕಾಸ ಸುಭಾಶ ಸುಣಗಾರ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಹುಲ ಈರಪ್ಪ ಪಾಟೀಲ ಎಂಬ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಬೆಳಗಾವಿ ವಿಮ್ಸ್​ಗೆ ರವಾನಿಸಲಾಗಿದೆ.

ಪ್ರತಿ ವರ್ಷದಂತೆ ಅದ್ದೂರಿಯಾಗಿ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿತ್ತು. ಕಿಡಿಗೇಡಿಗಳ ಕೃತ್ಯದಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಕೆಲವರು ಆರೋಪಿಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *