ಶಿವಮೊಗ್ಗ : ಅಡಕೆ ಬೆಳಗಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಎಲೆ ಚುಕ್ಕಿ ರೋಗ ಬಾದಿತ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವಾಗಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಲಾಭ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಉಂಟೂರು ಕೈಮರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅನುದಾನ ಒದಗಿಸಲಾಗುವುದು. ಎಲೆ ಚುಕ್ಕಿ ರೋಗ ಬಾದಿತ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವಾಗಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಲಾಭ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಅಡಿಕೆ ತೋಟಗಳಲ್ಲಿ ಎಲೆ ಚುಕ್ಕೆ ರೋಗ ಮತ್ತು ಇತರ ಕೀಟ ರೋಗಗಳ ಬಗ್ಗೆ ಅಧ್ಯಯನ ಮಾಡಲು ಸರ್ಕಾರವು ಸಂಬಂಧಪಟ್ಟ ವಿಶ್ವವಿದ್ಯಾಲಯದಿಂದ ತಜ್ಞರನ್ನು ಕಳುಹಿಸಿದೆ. ಕೇಂದ್ರ ಸರ್ಕಾರ ರಚಿಸಿದ ತಜ್ಞರ ಸಮಿತಿಯು ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ನಿರಂತರ ಮಳೆ ಮತ್ತು ಗಾಳಿಯಿಂದಾಗಿ, ರೋಗವು ವೇಗವಾಗಿ ಹರಡುತ್ತಿದೆ. ರೋಗವನ್ನು ನಿಯಂತ್ರಿಸಲು ಶಿಲೀಂಧ್ರನಾಶಕಗಳನ್ನು ಸಿಂಪಡಿಸಲಾಗುತ್ತದೆ. ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ತಜ್ಞ ವಿಜ್ಞಾನಿಗಳು ಮಾಡಿದ ಎಲ್ಲಾ ಶಿಫಾರಸುಗಳನ್ನು ಸರ್ಕಾರವು ಸೂಕ್ತವಾಗಿ ಅನುಸರಿಸುತ್ತದೆ ಎಂದು ಸಿಎಂ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

