ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹುಬ್ಬಳ್ಳಿ ಕೇಂದ್ರ ಕಛೇರಿಯಲ್ಲಿ ನಿರ್ಮಿಸಿದ ನವೀಕೃತ ವಿರೋಧ ಪಕ್ಷದ ನಾಯಕರ ಕಚೇರಿ ಶಾಸಕರಾದ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರುದ್ರಾಕ್ಷಿಮಠದ ಬಸವಲಿಂಗ ಮಹಾಸ್ವಾಮಿಗಳು, ಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ಪಾಲಿಕೆ ವಿರೋಧ ಪಕ್ಷದ ನಾಯಕರಾದ ದೊರಾಜ್ ಮನ್ನೆಕುಂಟ್ಲಾ, ಉಪಮೇಯರ್ ಉಮಾ ಮುಕುಂದ, ಪಾಲಿಕೆ ಸಭಾ ನಾಯಕ ತಿಪ್ಪಣ್ಣ ಮಜ್ಜಗಿ, ನಿರಂಜನ ಹಿರೇಮಠ, ಇಮ್ರಾನ್ ಎಲಿಗಾರ, ಸಂದೀಲ್ ಕುಮಾರ್, ರೂಪಾ ಶೆಟ್ಟಿ,ಪ್ರಕಾಶ ಬುರಬುರೆ, ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ವಿ.ಎಸ್.ಪ್ರಸಾದ್, ಕೇಶ್ವಾಪೂರದ ಅಕ್ಬರ್ ಅಲಿ, ಪಾದರ್ ಬೋರ್ಗಾವಿ ಸೇರಿದಂತೆ ಪಾಲಿಕೆ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

