Breaking News

ರಾಜ್ ನಾಥ್ ಸಿಂಗ್​ಗೆ ಮನವಿ ಸಲ್ಲಿಸಿದ ಸಿಎಂ


ಬೆಂಗಳೂರು: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮನವಿ ಮಾಡಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ, ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರನ್ನು ಕೋರಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *