ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಹಾಲಿ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪದಚ್ಯುತಿಗೊಳಿಸಿ, ಹೊಸ ಪೂರ್ಣಕಾಲೀನ ಪೀಠಾಧ್ಯಕ್ಷರನ್ನು ಸರ್ಕಾರವೇ ಆಯ್ಕೆ ಮಾಡುವ ಕುರಿತು ಚರ್ಚಿಸಲು ವೀರಶೈವ ಸಮುದಾಯದಿಂದ ಇಂದು ಸಭೆ ಕರೆಯಲಾಗಿದೆ.
ಡಾ. ಶಿವಮೂರ್ತಿ ಶಿವಶರಣರು ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲು ಆಗಿರುವಂತ ಬೆನ್ನಲ್ಲೇ, ಮಠದ ಪೀಠಾಧ್ಯಕ್ಷರ ಆಯ್ಕೆ ಕುರಿತಂತೆ ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಮುಖಂಡರ ಸಭೆಯನ್ನು ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಡಿಸೆಂಬರ್ 3 ರಂದು ಸಭೆ ಕರೆಯಲಾಗಿದೆ.
ಮುರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಮುರುಘಾ ಶರಣರನ್ನು ವಜಾಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಚರ್ಚಿಸಿ ಮುಂದಿನ ನಡೆಯ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

