Breaking News


ಅಂಜನಾದ್ರಿ ಬೆಟ್ಟದಲ್ಲಿ ಸಂಕೀರ್ತನಾ ಯಾತ್ರೆ : ಪೋಲಿಸ್ ಬಂದೋಬಸ್ತ್


ಕೊಪ್ಪಳ : ಡಿಸೆಂಬರ್ 5 ರ ಇಂದು ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ತೆರಳಲಿರುವ ಹನುಮ ಮಾಲಾಧಾರಿಗಳು ಆಂಜನೇಯ ದರ್ಶನ ಪಡೆದು ನಂತರ ಮಾಲೆ ವಿಸರ್ಜನೆ ಮಾಡಲಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪಿ ಆನೆಗುಂದಿಯ ಅಂಜನಾದ್ರಿ ಬೆಟ್ಟಕ್ಕೆ ತೆರಳಲಿರುವ ಹನುಮ ಮಾಲಾಧಾರಿಗಳು ಆಂಜನೇಯ ದರ್ಶನ ಪಡೆದು ನಂತರ ಮಾಲೆ ವಿಸರ್ಜನೆ ಮಾಡಲಿದ್ದಾರೆ.ಈ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ತಿಳಿಸಿದರು.

ಈ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, 2 ಡಿವೈಎಸ್ ಪಿ, 6 ಜನ ಸಿಪಿಐ, 13 ಸಬ್ ಇನ್ಸೆಪೆಕ್ಟರ್, 30 ಜನ ಎಎಸ್‌ಐ, 230 ಜನ ಪೇದೆಗಳು ಒಂದು ಕೆಎಸ್‌ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ವಿಡಿಯೋಗ್ರಫಿ ಗಸ್ತು ಪೊಲೀಸರು ಕೂಡ ಕಾವಲಿರಲಿದ್ದಾರೆ ಎಂದು ಮಾಹಿತಿ ನೀಡಿದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *