Breaking News


ಕಾಂಗ್ರೆಸ್ ಅಧ್ಯಕ್ಷ ಚಂದು ಪೂಜಾರಿ ನಿಧನ


ಹೆಬ್ರಿ: ಮುದ್ರಾಡಿಯ ಬಾಚುಮಜಲ್ ಚಂದು ಪೂಜಾರಿ (95) ಬುಧವಾರ ಸ್ವಗೃಹದಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಉದ್ಯಮಿ ಮನೋಜ್ ಪೂಜಾರಿ ಸಹಿತ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.
ಮಂಡಲ ಪಂಚಾಯತಿ ಸದಸ್ಯರಾಗಿ ಮುದ್ರಾಡಿಯ ಕಾಂಗ್ರೆಸ್ ಮುಖಂಡರಾಗಿ ಚಂದು ಪೂಜಾರಿ ಸಕ್ರಿಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಅವರ ನಿಕಟವರ್ತಿಯಾಗಿದ್ದರು.

ಡಾ.ಎಂ.ವೀರಪ್ಪ ಮೊಯಿಲಿ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್‌ ಕೊಡವೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸೇರಿ ಹಲವು ನಾಯಕರು ಅಂತಿಮ ದರ್ಶನ ಪಡೆದರು.

ಚಂದು ಪೂಜಾರಿ ಅವರ ಅಂತ್ಯಕ್ರಿಯೆ ಮುದ್ರಾಡಿ ಬಾಚುಮಜಲು ಮನೆಯಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಪುತ್ರ ಮಂಜುನಾಥ ಪೂಜಾರಿ ತಿಳಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *