ಪಾಟ್ನಾ:ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗ ಇರುವುದಿಲ್ಲ. ಪ್ರಧಾನ ರಂಗವೇ ಇರುತ್ತದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಪಾಟ್ನಾದಲ್ಲಿ ಭಾನುವಾರ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ತಮ್ಮ ಭಿನ್ನಾಭಿಪ್ರಾಯ ಮರೆತು ಒಗ್ಗೂಡಿದಾಗ ಮಾತ್ರ ಬಹುಮತ ಸಾಧ್ಯ ಎಂದರು.
ಪ್ರತಿಪಕ್ಷಗಳ ಒಕ್ಕೂಟ ರಚನಗೆ ತಾವೂ ಕೂಡ ಶ್ರಮಿಸುವುದಾಗಿ ಹೇಳಿದ್ದಾರೆ. 2020ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಯು ವಿರುದ್ಧ ಕೆಲಸ ಮಾಡಿತ್ತು ಎಂದು ಆರೋಪಿಸಿದ್ದಾರೆ.
ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಮನವಿ ಸಲ್ಲಿಸಿದರೂ, ಅದಕ್ಕೆ ಸೂಕ್ತ ಸ್ಪಂದನೆ ಸಿಕ್ಕಿಲ್ಲವೆಂದು ನಿತೀಶ್ ದೂರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

