Breaking News

ಅಮಿತಾಭ್ ಬಚ್ಚನ್ ಗೆ ಭಾರತ ರತ್ನ ಪ್ರಶಸ್ತಿ ನೀಡಿ ಎಂದು
ಮಮತಾ ಬ್ಯಾನರ್ಜಿ ಮನವಿ



ಬಾಲಿವುಡ್‌ನಲ್ಲಿ ನಟ ಅಮಿತಾಭ್ ಬಚ್ಚನ್ ಅವರ ಕಲಾಸೇವೆಯನ್ನ ಗುರುತಿಸಿ ಅವರಿಗೆ `ಭಾರತ ರತ್ನ ಪ್ರಶಸ್ತಿ’ ನೀಡಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.ಹಿಂದಿ ಚಿತ್ರರಂಗಕ್ಕೆ ಅಮಿತಾಭ್ ಅವರ ಕಲಾಸೇವೆಯ ಕೊಡುಗೆ ಅಪಾರ.

ಪಾತ್ರಗಳೇ ಜೀವ ತುಂಬಿ ನಟಿಸುವ ಮಹಾನ್ ನಟನಿಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕು ಎಂಬುದು ಕೆಲವು ವರ್ಷಗಳಿಂದ ಕೇಳಿ ಬರುತ್ತಿರುವ ಬಹುದೊಡ್ಡ ಬೇಡಿಕೆ. ಇದೀಗ ಮತ್ತೆಬಿಗ್ ಬಿ ಕಲಾಸೇವೆಯನ್ನ ಗುರುತಿಸಿ, ಭಾರತ ರತ್ನ ಪ್ರಶಸ್ತಿ ಕೊಡಿ ಎಂದು ಕೊಲ್ಕತ್ತಾ ಚಿತ್ರೋತ್ಸವದಲ್ಲಿ ದೀದಿ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ಅಮಿತಾಭ್‌ಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುವ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದಕ್ಕೆ ಮತ್ತಷ್ಟು ಬೆಂಬಲವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ನೀಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *