ಹುಬ್ಬಳ್ಳಿ: ರಸ್ತೆ ಅಗಲಿಕರಣದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ದರ್ಗಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ದರ್ಗಾದ ಆಡಳಿತ ಮಂಡಳಿ ನೇತೃತ್ವದಲ್ಲಿ ಇಂದು ತಡರಾತ್ರಿ ಮಹತ್ವದ ಸಭೆ ನಡೆಯಲಿದ್ದು, ಎಲ್ಲೆಡೆಯೂ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಈಗಾಗಲೇ ದರ್ಗಾದ ಆಡಳಿತ ಮಂಡಳಿಯು ಸಿಎಂ ಬಸವರಾಜ ಬೊಮ್ಮಾಯಿಯವರ ಭೇಟಿಗೆ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ದರ್ಗಾದ ಕಾರ್ಯಾಚರಣೆ ಬಗ್ಗೆ ಸಭೆಯ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

