ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಾಚರಣೆ ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರೇಟ್ ನ ಮತ್ತೋರ್ವ ಡಿಸಿಪಿ ಗೋಪಾಲ್ ಬ್ಯಾಕೋಡ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈಗಾಗಲೇ ಇಸ್ಲಾಂ ಧರ್ಮದ ಮುಖಂಡರು ಹಾಗೂ ಮೌಲ್ವಿಗಳು ಆಗಮಿಸಿದ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಮತ್ತಷ್ಟು ಭದ್ರತೆಯನ್ನು ಹೆಚ್ಚುಗೊಳಿಸಿದೆ.
ಒಟ್ಟಿನಲ್ಲಿ ಸುಖಾಂತ್ಯವಾಗಿ ಪೂರ್ಣಗೊಳ್ಳಬೇಕಿರುವ ದರ್ಗಾ ತೆರವು ಕಾರ್ಯಾಚರಣೆ ಯಾವ ಸ್ವರೂಪ ಪಡೆಯಲಿದೆ ಎಂಬುವುದನ್ನು ಕಾದುನೋಡಬೇಕಿದೆ.

bigtvnews | Hubli Dharwad News | Kannada News | Karnataka News Hubli News | News In Hubli | Local news

