ಮೈಸೂರು: ಅಪ್ಪ ಅಮ್ಮನ ಜಗಳದಿಂದ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕು ಹುಣಸನಾಳು ಗ್ರಾಮದಲ್ಲಿ ನಡೆದಿದೆ.
ಮಹೇಂದ್ರ (20) ಮೃತ ದುರ್ದೈವಿ. ಮನೆಯಲ್ಲಿ ತಂದೆ ತಾಯಿಯ ನಡುವಿನ ಗಲಾಟೆ ಕಂಡು ಮಹೇಂದ್ರ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದನು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

