ಬೆಳಗಾವಿ: ವೀರ ಸಾವರ್ಕರ್ ಅನ್ನು ಟಿಪ್ಪು ಸುಲ್ತಾನ್ ಗೆ ಹೋಲಿಸುವುದು ಮಾಡುವುದು ಸರಿಯಲ್ಲ. ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಾವರ್ಕರ್ ಭಾವಚಿತ್ರಕ್ಕೆ ಕಾಂಗ್ರೆಸ್ ಪಕ್ಷ ಮೃದು ಧೋರಣೆ ತೋರಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುದ್ಧಿ ಕಲಿತಂತೆ ತೋರ್ತಿದೆ. ರಾಹುಲ್ ಗಾಂಧಿಯೂ ಸಹ ಬುದ್ಧಿ ಕಲಿಯುವಂತಾಗಲಿ ಎಂದು ಹೇಳಿದರು.ರಾಜಕೀಯ ದುರುದ್ದೇಶ ಇಲ್ಲ: ಸಿಬಿಐ, ಇಡಿ ಇವೆಲ್ಲಾ ಸ್ವತಂತ್ರವಾಗಿರುವ ಸಂಸ್ಥೆಗಳಾಗಿವೆ. ಯಾರ ಮೇಲೆ ಭ್ರಷ್ಟಚಾರದ ಆರೋಪ ಇರುತ್ತದೆಯೋ, ಅಂತಹವರನ್ನು ಅವರು ತನಿಖೆ ಮಾಡ್ತಾರೆ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

