ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಉಂಟಾಗಿತ್ತು.ನಾಲ್ಕೈದು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸತೊಡಗಿದ್ದಾನೆ. ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯಿದೆ.ಬೆಂಗಳೂರಿನಲ್ಲಿ ಭಾನುವಾರ ಕೂಡ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಕೆಲವೆಡೆ ಸಂಜೆಯ ವೇಳೆಗೆ ತುಂತುರು ಮಳೆಯೂ ಸುರಿದಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

