ಬೆಳಗಾವಿ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ನವದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಮೀಸಲಾತಿ ಮರು ಹಂಚಿಕೆಗೆ ಕೇಂದ್ರದ ಅನುಮತಿ ಪಡೆಯಲು. ಅಲ್ಲದೆ, ನೆನಗುದಿಗೆ ಬಿದ್ದಿರುವ ವಿವಿಧ ಯೋಜನಗಳಿಗೆ ಅನುಮೋದನೆ ಮತ್ತು ಅನುದಾನ ಬಿಡುಗಡೆಗೆ ಮನವಿ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
2023-24ನೇ ಸಾಲಿನ ಬಜೆಟ್ ಬಗ್ಗೆ ಕೇಂದ್ರದಿಂದ ಹೆಚ್ಚಿನ ಅನುದಾನ, ಯೋಜನೆಗಳ ಜೊತೆಗೆ ಮಹತ್ವದ ಯೋಜನೆಗಳ ಘೋಷಣೆಗೆ ಅನುಮತಿ ಪಡೆಯಲು ಕಸರತ್ತು ನಡೆಸಲಿದ್ದಾರೆ. ಅಂತೆಯೇ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡವುದು ಸೇರಿದೆ. ಜನವರಿ 12 ರಂದು ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಪ್ರಧಾನಿಗೆ ಆಹ್ವಾನ ಸೇರಿದೆ ಎಂದು ಹೇಳಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

