ಬೆಳಗಾವಿ : ರಾಜ್ಯ ಸರ್ಕಾರವು ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹ ಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ಪೌರಕಾರ್ಮಿಕರಿಗೆ 5,188 ಮನೆಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಡಳಿ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯಾದ್ಯಂತ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳನ್ನು ನೀಡಲು ಅನುಮೋದನೆಗೊಂಡು ಅನೇಕ ಕಡೆ ಕಾಮಗಾರಿಯೂ ನಡೆಯುತ್ತಿದೆ. ಪೌರ ಕಾರ್ಮಿಕರು ನಿವೇಶನ ಹೊಂದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ 7.5 ಲಕ್ಷ ರೂ. ಅನುದಾನ ನೀಡುತ್ತದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸುತ್ತಿರುವ 168 ಮನೆಗಳ ಗುಣಮಟ್ಟದಲ್ಲಿ ಲೋಪವಿದ್ದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

