Breaking News


ಕಾಂಗ್ರೆಸ್​ ಕಾರ್ಯಕ್ರಮದಲ್ಲಿ ಕಾರ್ಯಕರ್ತ ದುರಂತ ಸಾವು


ತುಮಕೂರು: ಕೊರಟಗೆರೆಯಲ್ಲಿ ನಿನ್ನೆ(ಬುಧವಾರ) ನಡೆದ ಕಾಂಗ್ರೆಸ್​ ಕಾರ್ಯಕ್ರಮದಲ್ಲಿ ದುರಂತವೊಂದು ಸಂಭವಿಸಿದೆ. ವೇದಿಕೆಯಲ್ಲಿ ಭಾಷಣ ಮಾಡಿದ ಮರುಕ್ಷಣವೇ ಕಾರ್ಯಕರ್ತ ಪ್ರಾಣಬಿಟ್ಟಿದ್ದಾರೆ. ವೇದಿಕೆಯಲ್ಲೇ ಕುಸಿದುಬಿದ್ದ ಕಾರ್ಯಕರ್ತನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.

ಕ್ಯಾಷವಾರ ಗ್ರಾಮದ ಗ್ರಾಪಂ ಮಾಜಿ ಸದಸ್ಯ ನಾಗರಾಜಪ್ಪ (60)ಮೃತ. ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಬುಧವಾರ ಕಾಂಗ್ರೆಸ್​ ಸಂಸ್ಥಾಪನಾ ದಿನ ಹಾಗೂ ಎಸ್​ಟಿ-ಎಸ್ಸಿ ಸಮಾವೇಶದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಮಾತು ಮುಗಿಸಿ ಕೆಳಗಿಳಿಯುವಾಗ ನಾಗರಾಜಪ್ಪ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟರಲ್ಲಿ ಪ್ರಾಣ ಹೋಗಿತ್ತು.

ಡಾ.ಜಿ.ಪರಮೇಶ್ವರ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಾವಿರಾರು ಕಾರ್ಯಕರ್ತರು ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನಾಗರಾಜಪ್ಪಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *