Breaking News

ಪುತ್ರ ನ ನಿಧನ ಸುದ್ದಿ ಕೇಳಿ ತಾಯಿ ಸಾವು


ಗದಗ: ಪುತ್ರ ಶೋಕಂ ನಿರಂತರಂ ಎಂಬಂತೆ ತಂದೆ-ತಾಯಿ ಕಣ್ಮುಂದೆ ಮಕ್ಕಳು ಸಾವನ್ನಪ್ಪಬಾರದೆನ್ನುತ್ತಾರೆ. ಆದರೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ತಾಯಿ, ಮಗ ಸಾವಿನಲ್ಲೂ ಒಂದಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದ ಶಿವರುದ್ರಯ್ಯ ಅಂದಾನಯ್ಯ ಪೂಜಾರ್ (38) ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿ, ಬಸಮ್ಮ ಅಂದಾನಯ್ಯ ಪೂಜಾರ್ (68) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗನ ಸಾವಿನಿಂದ ಇಡೀ ಗ್ರಾಮದಲ್ಲಿ ಶೋಕ ಸಾಗರದಲ್ಲಿ ಮುಳಗಿದೆ. ತಾಯಿ ಹಾಗೂ ಮಗನ ಶವಗಳಿಗೆ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *