ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಸೇರಿದಂತೆ ಇತರ ಭದ್ರತಾ ಪಡೆಗಳ ಮೂಲಕ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಆದರೆ ಈ ನಡುವೆ ಭದ್ರತಾ ಲೋಪವೊಂದು ಕಂಡು ಬಂದಿದೆ. ಪ್ರಧಾನಿಯ ರೋಡ್ ಷೋ ವೇಳೆ ಯುವಕನೊಬ್ಬ ಬ್ಯಾರಿಕೇಡ್ ದಾಟಿ ಮೋದಿಯವರಿಗೆ ಹಾರ ಹಾಕಲು ಬಂದಿದ್ದಾನೆ.
ಇನ್ನೂ ಖುದ್ದು ಮೋದಿ ಕೈಗೆ ಹೂವಿನ ಹಾರ ಕೊಡಲು ಯತ್ನಿಸಿದ್ದು, ಬಳಿಕ ಯುವಕನನ್ನು ಎಳೆದೊಯ್ದಿದ್ದಾರೆ. ಪೊಲೀಸರ ಕರ್ತವ್ಯ ಲೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಯುವಕನಿಂದ ಹೂಮಾಲೆ ಪಡೆದ ಪ್ರಧಾನಿ ನರೇಂದ್ರ ಮೋದಿ ಅದನ್ನು ತಮ್ಮ ವಾಹನದ ಮೇಲೆ ಇರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

