Breaking News

ಇಂದಿನಿಂದ ಬೆಳಗಾವಿ – ಸಿಕಂದರಾಬಾದ್ ನಡುವೆ ನಿತ್ಯ ರೈಲು ಸೇವೆ : ಸಚಿವ ಜೋಶಿ

ನವದೆಹಲಿ : ಬೆಳಗಾವಿ ಹಾಗೂ ಸಿಕಂದರಾಬಾದ್ ಮಾರ್ಗದಲ್ಲಿ ನಿತ್ಯ ರೈಲು ಸೇವೆ ಇಂದಿನಿಂದ (ಜನವರಿ 17) ಆರಂಭವಾಗಿದೆ. ಬಹು ಬೇಡಿಕೆಯ ಮಾರ್ಗ ಇದಾಗಿದ್ದು ಈ ಮಾರ್ಗ ಮಧ್ಯ ಓಡಾಡುವ ಪ್ರಯಾಣಿಕರಿಗೆ ಅತ್ಯಂತ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ.

ಬೆಳಗಾವಿಯಿಂದ ಹೊರಡುವ ಈ ರೈಲು ಖಾನಪುರ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಕೊಪ್ಪಳ, ಬಳ್ಳಾರಿ, ಗುಂತಕಲ್ಲ, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಚಿತ್ತಾಪುರ, ಮಳಖೇಡ ರೋಡ್, ವಿಕಾರಬಾದ್, ಬೇಗಂಪೇಟ ಮಾರ್ಗದ ಮೂಲಕ ಸಿಕಂದರಾಬಾದ್ ತಲುಪಲಿದೆ.

ಈ ರೈಲು ಸೇವೆ ಆರಂಭಕ್ಕೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಈ ವಿಶೇಷ ರೈಲು ಆರಂಭಿಸುವ ನಿರ್ಧಾರ ಕೈಗೊಂಡು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿದ ರೈಲ್ವೆ ಸಚಿವರಾದ ಶ್ರೀ ಆಶ್ವಿನಿ ವೈಷ್ಣವ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಚಿವ ಜೋಶಿಯವರು ಹೇಳಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ಪುಂಡರ ಹಾವಳಿ: ಗಾಂಜಾ ಮತ್ತಿನಲ್ಲಿ ಡೆಲಿವರಿ ಬಾಯ್ ಮೇಲೆ ಹಲ್ಲೆ!

ಬೆಂಗಳೂರು: ಯಲಹಂಕದ ಅಟ್ಟೂರು ಲೇಔಟ್‌ನಲ್ಲಿ ಡೆಲಿವರಿ ಬಾಯ್‌ ಮೇಲೆ ಆರೇಳು ಮಂದಿ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. …

Leave a Reply

Your email address will not be published. Required fields are marked *