Breaking News

ಇಂದಿನಿಂದ ಬೆಳಗಾವಿ – ಸಿಕಂದರಾಬಾದ್ ನಡುವೆ ನಿತ್ಯ ರೈಲು ಸೇವೆ : ಸಚಿವ ಜೋಶಿ

ನವದೆಹಲಿ : ಬೆಳಗಾವಿ ಹಾಗೂ ಸಿಕಂದರಾಬಾದ್ ಮಾರ್ಗದಲ್ಲಿ ನಿತ್ಯ ರೈಲು ಸೇವೆ ಇಂದಿನಿಂದ (ಜನವರಿ 17) ಆರಂಭವಾಗಿದೆ. ಬಹು ಬೇಡಿಕೆಯ ಮಾರ್ಗ ಇದಾಗಿದ್ದು ಈ ಮಾರ್ಗ ಮಧ್ಯ ಓಡಾಡುವ ಪ್ರಯಾಣಿಕರಿಗೆ ಅತ್ಯಂತ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ.

ಬೆಳಗಾವಿಯಿಂದ ಹೊರಡುವ ಈ ರೈಲು ಖಾನಪುರ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಕೊಪ್ಪಳ, ಬಳ್ಳಾರಿ, ಗುಂತಕಲ್ಲ, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಚಿತ್ತಾಪುರ, ಮಳಖೇಡ ರೋಡ್, ವಿಕಾರಬಾದ್, ಬೇಗಂಪೇಟ ಮಾರ್ಗದ ಮೂಲಕ ಸಿಕಂದರಾಬಾದ್ ತಲುಪಲಿದೆ.

ಈ ರೈಲು ಸೇವೆ ಆರಂಭಕ್ಕೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಈ ವಿಶೇಷ ರೈಲು ಆರಂಭಿಸುವ ನಿರ್ಧಾರ ಕೈಗೊಂಡು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿದ ರೈಲ್ವೆ ಸಚಿವರಾದ ಶ್ರೀ ಆಶ್ವಿನಿ ವೈಷ್ಣವ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಚಿವ ಜೋಶಿಯವರು ಹೇಳಿದ್ದಾರೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *