ನವದೆಹಲಿ : ಬೆಳಗಾವಿ ಹಾಗೂ ಸಿಕಂದರಾಬಾದ್ ಮಾರ್ಗದಲ್ಲಿ ನಿತ್ಯ ರೈಲು ಸೇವೆ ಇಂದಿನಿಂದ (ಜನವರಿ 17) ಆರಂಭವಾಗಿದೆ. ಬಹು ಬೇಡಿಕೆಯ ಮಾರ್ಗ ಇದಾಗಿದ್ದು ಈ ಮಾರ್ಗ ಮಧ್ಯ ಓಡಾಡುವ ಪ್ರಯಾಣಿಕರಿಗೆ ಅತ್ಯಂತ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ.
ಬೆಳಗಾವಿಯಿಂದ ಹೊರಡುವ ಈ ರೈಲು ಖಾನಪುರ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಕೊಪ್ಪಳ, ಬಳ್ಳಾರಿ, ಗುಂತಕಲ್ಲ, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಚಿತ್ತಾಪುರ, ಮಳಖೇಡ ರೋಡ್, ವಿಕಾರಬಾದ್, ಬೇಗಂಪೇಟ ಮಾರ್ಗದ ಮೂಲಕ ಸಿಕಂದರಾಬಾದ್ ತಲುಪಲಿದೆ.
ಈ ರೈಲು ಸೇವೆ ಆರಂಭಕ್ಕೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಈ ವಿಶೇಷ ರೈಲು ಆರಂಭಿಸುವ ನಿರ್ಧಾರ ಕೈಗೊಂಡು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿದ ರೈಲ್ವೆ ಸಚಿವರಾದ ಶ್ರೀ ಆಶ್ವಿನಿ ವೈಷ್ಣವ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಚಿವ ಜೋಶಿಯವರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

