Breaking News

ತೆಗ್ಗಿಗೆ ಇಳಿದ ಲಾರಿ : ಪ್ರಾಣಾಪಾಯದಿಂದ ಪಾರು…

ನವಲಗುಂದ : ಸೋಮವಾರ ಬೆಳ್ಳಂಬೆಳಗ್ಗೆ ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹತ್ತಿ ಸಾಗಿಸುತ್ತಿದ್ದ ಲಾರಿ ಒಂದು ತೆಗ್ಗಿಗೆ ಇಳಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಹೌದು… ನವಲಗುಂದ ಕಡೆಯಿಂದ ಸೌದತ್ತಿ ಕಡೆಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲೆ ಇದ್ದ ತೆಗ್ಗಿಗೆ ಉರುಳಿದೆ. ಘಟನೆಯಿಂದ ಲಾರಿಗೆ ಹಾನಿ ಉಂಟಾಗಿದ್ದು, ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯರ ಸಹಾಯದಿಂದ ಇನ್ನೊಂದು ಲಾರಿಗೆ ಹತ್ತಿಯ ಚೀಲವನ್ನು ವರ್ಗಾಯಿಸಲಾಯಿತು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *