Breaking News

ಪತ್ರಕರ್ತರಾದ ಯಲ್ಲಪ್ಪ ಸೋಲಾರಗೊಪ್ಪ, ಶಿವಕುಮಾರ ಪತ್ತಾರಗೆ ರಾಯಣ್ಣ ಪ್ರಶಸ್ತಿ

ಹುಬ್ಬಳ್ಳಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 229ನೇ ಹುತಾತ್ಮ ದಿನಾಚರಣೆ ಅಂಗವಾಗಿ ಪತ್ರಿಕೋದ್ಯಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 26ರಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಯುಕ್ತ ಕರ್ನಾಟಕದ ಷಣ್ಮುಖ ಕೋಳಿವಾಡ, ಟಿವಿ 5 ಕನ್ನಡ ವರದಿಗಾರರಾದ ಯಲ್ಲಪ್ಪ ಸೋಲಾರಗೊಪ್ಪ, ಟಿವಿ 9 ವರದಿಗಾರರಾದ ಶಿವಕುಮಾರ್ ಪತ್ತಾರ, ಪ್ರಜಾವಾಣಿಯ ಗೋವಿಂದ ಜವಳಿ, ಸಂಯುಕ್ತ ಕರ್ನಾಟಕದ ವಿನಾಯಕ ದೇಶಪಾಂಡೆ ಅವರಿಗೆ ಮಾಧ್ಯಮ ಕ್ಷೇತ್ರದಲ್ಲಿಯ ಗಣನೀಯ ಸೇವೆಯನ್ನು ಪರಿಗಣಿಸಿ ರಾಯಣ್ಣ ಪ್ರಶಸ್ತಿ-2023 ನೀಡಲು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇನ್ನೂ ಸಾಮಾಜಿಕ ಸೇವೆ, ವೈದ್ಯಕೀಯ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಸನ್ಮಾನಿಸಿ ಗೌರವ ಸೂಚಿಸಲಾಗುತ್ತದೆ.

Share News

About Shaikh BigTv

Check Also

ಸಿದ್ದರಾಮಯ್ಯಗೆ ಕ್ಷೇತ್ರ ಸಿಗದಂತಹ ಪರಿಸ್ಥಿತಿ-ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಈಗ ಕೋಲಾರ ಕ್ಷೇತ್ರ ಬಿಟ್ಟು …

Leave a Reply

Your email address will not be published. Required fields are marked *

You cannot copy content of this page