ನವಲಗುಂದ : ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗನೂರ ಗ್ರಾಮದ ಕುಡಿಯುವ ನೀರಿನ ಕೆರೆಯ ಹೂಳೆತ್ತುವ ಕಾಮಗಾರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನವಲಗುಂದ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು, ನರೇಗಾ ಅಧಿಕಾರಿಗಳು, ಗುಡಿಸಾಗರ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಸರ್ವ ಸಿಬ್ಬಂದಿ ವರ್ಗ, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನಾಗನೂರ ಗ್ರಾಮದ ಗುರು ಹಿರಿಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

