Breaking News

ಹೃದಯಾಘಾತದಿಂದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

ಧಾರವಾಡ : ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಇಂದು ನಸುಕಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. 64 ವರ್ಷದ ಶಿವಾನಂದ ಅಂಬಡಗಟ್ಟಿ ಅವರಿಗೆ ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು ಸೇರಿದಂತೆ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವಿದೆ.

1989 ರಿಂದ ರಾಜಕಾರಣದಲ್ಲಿ ಇದ್ದ ಇವರು, ಲೊಹೀತ್ ನಾಯ್ಕರ್ ವಿರುದ್ಧ ಪಕ್ಷೇತರರಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಶಾಸಕರಾಗಿದ್ದರು. ನಂತರ ಕಾಂಗ್ರೆಸ್ ಪಕ್ಷದ ಜೊತೆಗೆ ಸೇರಿ ಜಿಲ್ಲೆಯಲ್ಲಿ ಕೈ ಪಕ್ಷ ಬಲಪಡಿಸಲು ಶ್ರಮಿಸಿದ್ದರು. ಇವರು ಮಾಜಿ ಶಾಸಕ ಶ್ರೀಕಾಂತ್ ಅಂಬಡಗಟ್ಟಿ ಅವರ ಸಹೋದರರೂ ಹೌದು. ಇಂದು ಮಧ್ಯಾಹ್ನ 3 ಗಂಟೆಗೆ ಮೃತರ ಅಂತ್ಯಕ್ರಿಯೆ ಅಳ್ಳಾವರದ ರುದ್ರಭೂಮಿಯಲ್ಲಿ ನಡೆಯಲಿದೆ.

Share News

About BigTv News

Check Also

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಕಾಲೇಜು ಬಳಿ ಮಾರಾಟ: ಆರೋಪಿ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು …

Leave a Reply

Your email address will not be published. Required fields are marked *