Breaking News

ಅಪಘಾತ ಬೈಕ್ ಸವಾರನ ಸ್ಥಿತಿ ಗಂಭಿರ,ಜೊತೆಗಿದ್ದವನ ಸಾವು

ಕುಂದಗೋಳ : ತಾಲೂಕಿನ ಕುಬಿಹಾಳ ಗ್ರಾಮದ ಬೆಣ್ಣೆ ಹಳ್ಳದ ಬಳಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಬ್ರಿಡ್ಜ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿದೆ. ಹಿಂಬದಿಯಲ್ಲಿ ಕುಳಿತ ಸವಾರ ಸಾವನ್ನಪ್ಪಿದ್ದಾನೆ.

ಕಳೆದ ಎರಡು ದಿನಗಳ ಹಿಂದೆ ಅರಳಿಕಟ್ಟಿ ಗ್ರಾಮದಿಂದ ಹುಲಗೂರ ದರ್ಗಾಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಹಳ್ಳದ ಬ್ರಿಡ್ಜ್ ಗೆ ಗುದ್ದಿದ ಪರಿಣಾಮ ,ಬೈಕ್’ನಲ್ಲಿದ್ದ ಇಬ್ಬರು ಸವಾರರು ಗಾಯಗೊಂಡಿದ್ದರು.

ಅರಳಿಕಟ್ಟಿ ಗ್ರಾಮದ 20 ವರ್ಷದ ಮೌಲಾಸಾಬ ಬೂದಿಹಾಳ ಮತ್ತು 19 ವರ್ಷದ ಹಾಜಿಮಲಂಗ ಅಕ್ಕಿ ಗಾಯಾಳುಗಳಾಗಿದ್ದು, ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಮೌಲಾಸಾಬ ಬೂದಿಹಾಳ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

Share News

About admin

Check Also

ನಟೋರಿಯಸ್ ರೌಡಿ ಮೇಲೆ ಫೈರ್..ರೌಡಿ ಶೀಟರ್ ಗಳ ನಡುಕು ಹುಟ್ಟಿಸಿದ ಹುಬ್ಬಳ್ಳಿ ಪೊಲೀಸರ..

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪೊಲೀಸರ ಮಿಂಚಿನ ದಾಳಿ ನಟೋರಿಯಸ್ ರೌಡಿ ಅರೆಸ್ಟ್.ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಫೈರ್ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್.ಹುಬ್ಬಳ್ಳಿಯ …

Leave a Reply

Your email address will not be published. Required fields are marked *

You cannot copy content of this page