Breaking News

ಅಪಘಾತ ಬೈಕ್ ಸವಾರನ ಸ್ಥಿತಿ ಗಂಭಿರ,ಜೊತೆಗಿದ್ದವನ ಸಾವು

ಕುಂದಗೋಳ : ತಾಲೂಕಿನ ಕುಬಿಹಾಳ ಗ್ರಾಮದ ಬೆಣ್ಣೆ ಹಳ್ಳದ ಬಳಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಬ್ರಿಡ್ಜ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿದೆ. ಹಿಂಬದಿಯಲ್ಲಿ ಕುಳಿತ ಸವಾರ ಸಾವನ್ನಪ್ಪಿದ್ದಾನೆ.

ಕಳೆದ ಎರಡು ದಿನಗಳ ಹಿಂದೆ ಅರಳಿಕಟ್ಟಿ ಗ್ರಾಮದಿಂದ ಹುಲಗೂರ ದರ್ಗಾಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಹಳ್ಳದ ಬ್ರಿಡ್ಜ್ ಗೆ ಗುದ್ದಿದ ಪರಿಣಾಮ ,ಬೈಕ್’ನಲ್ಲಿದ್ದ ಇಬ್ಬರು ಸವಾರರು ಗಾಯಗೊಂಡಿದ್ದರು.

ಅರಳಿಕಟ್ಟಿ ಗ್ರಾಮದ 20 ವರ್ಷದ ಮೌಲಾಸಾಬ ಬೂದಿಹಾಳ ಮತ್ತು 19 ವರ್ಷದ ಹಾಜಿಮಲಂಗ ಅಕ್ಕಿ ಗಾಯಾಳುಗಳಾಗಿದ್ದು, ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಮೌಲಾಸಾಬ ಬೂದಿಹಾಳ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರ! ತಪ್ಪು ನಿರ್ಧಾರ ಜಿಲ್ಲೆಯ ಕಾಂಗ್ರೆಸ್‌ಗೆ ಭಾರೀ ಹೊಡೆತ..?

ಫೋಟೋ ಪಾಲಿಟಿಕ್ಸ್‌ಗೆ ಮಣೆ ಬೇಡ, ಸಂಘಟನೆಯ ನಾಯಕರಿಗೆ ಮನ್ನಣೆ ಕೊಡಿ! ಡಿಸಿಸಿ ಆಯ್ಕೆ ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ… ಡಿಸಿಸಿ ಅಧ್ಯಕ್ಷ ಸ್ಥಾನ: …

Leave a Reply

Your email address will not be published. Required fields are marked *