Breaking News

ಅಂತಾರಾಷ್ಟ್ರೀಯ ಸಿರಿ ಧಾನ್ಯ ಮೇಳ

ಬೆಳಗಾವಿ : ಜಲಜೀವನ ಮಿಷನ್ ಯೋಜನೆಗೆ ಶಂಕುಸ್ಥಾಪನೆ, ನವೀಕೃತ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವಿಕೆ, ಲೊಂಡ-ಬೆಳಗಾವಿ-ಘಟಪ್ರಭಾ ಮಾರ್ಗದ ಡಬ್ಲಿಂಗ್ ಕಾಮಗಾರಿ ಸೇರಿದಂತೆ 2240 ಕೋಟಿ‌ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಗಾವಿಯ ಹೊರವಲಯದ ಮಾಲಿನಿ ಸಿಟಿ ಮೈದಾನಲ್ಲಿ ಏರ್ಪಡಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸೋಮವಾರ ರಾಷ್ಟ್ರಕ್ಕೆ ಸಮರ್ಪಿಸಿದರು. ಅಂತಾರಾಷ್ಟ್ರೀಯ ಸಿರಿ ಧಾನ್ಯ ಮೇಳದ ನೆನಪಿನಾರ್ಥ, ಸಿರಿಧಾನ್ಯಗಳನ್ನು ಮಡಿಕೆಗೆ ತುಂಬುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ‌ ಅಡಿ 13ನೇ ಕಂತಿನ 16800 ಕೋಟಿ ರೂ.ಹಣವನ್ನು ಎಂಟು ಕೋಟಿಗೂ ಅಧಿಕ ರೈತರಿಗೆ ನೇರ ನಗದು ವರ್ಗಾವಣೆ ಮುಖಾಂತರ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ನರೇಂದ್ರಸಿಂಗ್ ತೋಮರ್, ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಬಿ.ಸಿ.ಪಾಟೀಲ್,ಶಶಿಕಲಾ ಜೊಲ್ಲೆ, ಸಂಸದರಾದ ಮಂಗಳಾ ಸುರೇಶ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ,ಶಾಸಕರಾದ ಮಹೇಶ ಕುಮಠಳ್ಳಿ, ಪಿ.ರಾಜೀವ, ದುರ್ಯೋಧನ ಐಹೊಳೆ, ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ, ಅಭಯ್ ಪಾಟೀಲ,ಮಹದೇವಪ್ಪ ಯಾದವಾಡ,ಶ್ರೀಮಂತ್ ಪಾಟೀಲ, ಅನಿಲ ಬೆನಕೆ,ಮಹಾಂತೇಶ ದೊಡ್ಡಗೌಡರ್,ಲಕ್ಷ್ಮಣ ಸವದಿ,ಹನುಮಂತ ನಿರಾಣಿ,ಡಾ.ಸಾಬಣ್ಣ ತಳವಾರ, ಸೇರಿದಂತೆ ಇನ್ನೀತರರು ಇದ್ದರು.

Share News

About admin

Check Also

ಅನ್ನಭಾಗ್ಯದಡಿ ಈ ತಿಂಗಳು ಸಿಗಲಿದೆ 15 ಕಿಲೋ ಅಕ್ಕಿ, ಫೆಬ್ರವರಿ ಹೆಚ್ಚುವರಿ ಅಕ್ಕಿ ಈಗ ವಿತರಣೆ

ಅನ್ನಭಾಗ್ಯ ಯೋಜನೆಯಡಿ ಮಾರ್ಚ್‌ ತಿಂಗಳಲ್ಲಿ ಫಲಾನುಭವಿಗಳಿಗೆ ಯುಗಾದಿ ಬಂಪರ್‌ ಕೊಡುಗೆ ಸಿಗಲಿದೆ. ಬಾಕಿ ಸೇರಿ 15 ಕೆ.ಜಿ. ಅಕ್ಕಿ ಪ್ರತಿ …

Leave a Reply

Your email address will not be published. Required fields are marked *

You cannot copy content of this page