Breaking News

ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ

ಕುಂದಗೋಳ ಮತಕ್ಷೇತ್ರ ಹುಬ್ಬಳ್ಳಿ ತಾಲೂಕಿನ ಶೇರೆವಾಡ್ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಇವರ ಅಡಿಯಲ್ಲಿ ನಡೆದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯ ಉದ್ಘಾಟನೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕರಾದ ಶ್ರೀಮತಿ ಕುಸುಮಾವತಿ ಚ ಶಿವಳ್ಳಿಯವರು ನೆರವೇರಿಸಿದರು. ನಂತರ ಮಾತನಾಡಿದ ಅವರು ಮಹಿಳೆ ಅಬಲೇಯಲ್ಲ ಸಬಲೇ ಎನ್ನುವಂಥ ಹೆಮ್ಮೆಗೆ ಇಂದು ಧರ್ಮ ಸ್ಥಳ ಗ್ರಾಮಾಭಿವೃದ್ಧಿಯ ಸಂಸ್ಥೆ ಸೇವೆ ಮಾಡುತ್ತಿದೆ. ಇವರ ಕಾರ್ಯ ಶ್ಲಾಘನೀಯ ನಿಮ್ಮ ಜೊತೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕರು ಉಮೇಶ ಹೇಬಸುರ, ಶಿವಾನಂದ ಉಳ್ಳಾಗಡ್ಡಿ, ಯೋಗೀಶ ಎ, ವಿದ್ಯಾ ಕುಂದರಗಿ,ಗಿರಿಜಾ ಪಾಟೀಲ,ಮಹಾದೇವಿ ಅಮತುರ, ಆಶ್ವಿನಿ ತೋಪಣ್ಣವರ, ದಿನೇಶ ಎಂ,ರೇಖಾ ಕಡ್ಲಿಗುಂಡಿ ಜಯಂತ ಕೆ, ದೊಡ್ಡಮನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Share News

About admin

Check Also

ಹುಬ್ಬಳ್ಳಿ-ಧಾರವಾಡದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಧಾರವಾಡ : ಹು-ಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ: ಸಂತೋಷಕುಮಾರ ಬಿರಾದಾರ ಅವರು …

Leave a Reply

Your email address will not be published. Required fields are marked *

You cannot copy content of this page