ಹುಬ್ಬಳ್ಳಿ: ಟಿಕೆಟ್ ವಿಚಾರವಾಗಿ ಹೈ ಕಮಾಂಡ್ ನನಗೆ ಬೆಳಿಗ್ಗೆ ಪೋನ್ ಮಾಡಿದ್ದರು. ಹಿರಿಯ ನಾಯಕರು ಈ ಬಾರಿ ಸ್ಪರ್ಧೆ ಮಾಡುವುದು ಬೇಡ ಎಂದರು. ಆದರೆ ನಾನು ಈ ಭಾರಿ ಸ್ಪರ್ಧೆ ಮಾಡುವುದಾಗಿಯೇ ಹೇಳಿದ್ದೇನೆ. ಈ ಬಗ್ಗೆ ಹೈ ಕಮಾಂಡ್ ತೀರ್ಮಾನ ತೆಗೆದುಕೊಂಡು ನನಗೆ


ಟಿಕೆಟ್ ಕೊಡುವ ಭರವಸೆ ಇದೆ. ಮತ್ತೊಮ್ಮೆ ಶಾಸಕನಾಗಿ ಜನಸೇವೆಗೆ ಬರುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ತಮ್ಮ ನಿವಾಸದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ವರಿಷ್ಠರ ದೂರವಾಣಿ ಕರೆಯಿಂದ ಮನಸ್ಸಿಗೆ ನೋವಾಗಿದೆ. ಆದರೆ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಮೂವತ್ತಕ್ಕೂ ಹೆಚ್ಚು ವರ್ಷಗಳ ಕಾಲ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಈ ನಿಟ್ಟಿನಲ್ಲಿ ನಾನು ಹೈ ಕಮಾಂಡ್ ಗೆ ಮನವಿ ಮಾಡಿದ್ದೇನೆ. ಅವರು ಕೂಡ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದರು.ಸ್ಪರ್ಧೆ ಮಾಡಬೇಡ ಎಂದು ಯಾವ ಕಾರಣಕ್ಕೆ ಹೇಳಿದ್ದಾರೋ ಗೊತ್ತಿಲ್ಲ. ನನ್ನ

ರಾಜಕೀಯ ಇತಿಹಾಸದಲ್ಲಿ ಯಾವುದೇ ಒಂದು ಬ್ಲಾಕ್ ಮಾರ್ಕ್ ಕೂಡ ಇಲ್ಲ. ಒಂದು ಅಲಿಗೇಶನ್ ಇಲ್ಲ. ಭ್ರಷ್ಟಾಚಾರದ ಆರೋಪ ಇಲ್ಲ. ಯಾವ ಆಧಾರದ ಮೇಲೆ ನಾನು ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದರು.ಈಗಾಗಲೇ ಸಾಕಷ್ಟು ಬೆಂಬಲ ವ್ಯಕ್ತವಾಗಿದ್ದು, ಈ ಬಾರಿಯೂ ಕೂಡ ಅತಿಹೆಚ್ಚು ಅಂತರದಿಂದ ಆರಿಸಿ ಬರುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

