ನವಲಗುಂದ: ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಅನೇಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ನೂತನ ಶಾಸಕ ಎನ್.ಎಚ್ ಕೋನರಡ್ಡಿ ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಲೋಪದೋಷಗಳು ಇರುವ ಬಗ್ಗೆ ಶಾಸಕ ಕೋನರಡ್ಡಿ ಪ್ರಯಾಣಿಕರ ಹಾಗೂ ಸಾರ್ವಜನಿಕರ ಅಹವಾಲು ಆಲಿಸಿದರು. ಬಸ್ ನಿಲ್ದಾಣದ ಸಮಸ್ಯೆಗಳು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು. ಅಂಗಡಿಯ ಮಾಲೀಕರಿಗೆ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕೆಂದು ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





